ನಾಪೋಕ್ಲು (www.vknews.in) : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಟ್ಟಮುಡಿ ಗ್ರಾಮದ ಕೆ.ಎಂ.ಅಹ್ಮದ್ ಶಖೀಕ್ ಮಂಗಳೂರಿನ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ನಲ್ಲಿ ಪ್ರಥಮ ರ್ಯಾಂಕ್ ಪಡೆದು ಬಿಇ (ಹಾನ್ಸ್ )ಗಾಗಿ ಕೋರ್ಸ್ ಸರ್ಟಿಫಿಕೇಟ್ ಪಡೆದು ಮಾಸ್ಟರ್ ಡಿಗ್ರಿ ಪ್ರವೇಶ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಇವರು ಕೊಟ್ಟಮುಡಿಯ ಮರ್ಕಝ್ ಶಾಲೆಯಲ್ಲಿ ಎಲ್ಕೆಜಿ, ಯುಕೆಜಿ ಹಾಗೂ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿವರೆಗೆ ವ್ಯಾಸಂಗ ಮಾಡಿ, 6ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಗಾಳಿಬೀಡಿನ ನವೋದಯ ಶಾಲೆಯಲ್ಲಿ ವ್ಯಾಸಂಗ ಮುಗಿಸಿದ್ದಾರೆ.
ಬಳಿಕ ಮಂಗಳೂರಿನ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪ್ರಥಮ ರ್ಯಾಂಕ್ ಪಡೆದು ಗೇಟ್ ಎಂಟ್ರನ್ಸ್ ಎಕ್ಸಾಮ್ ಮೂಲಕ ರಾಜಸ್ಥಾನದ ಬಿಟ್ಸ್ ಪಿಲಾನಿಯಲ್ಲಿ ಮಾಸ್ಟರ್ ಡಿಗ್ರಿ ಪ್ರವೇಶ ಪಡೆಯುವ ಮೂಲಕ ಕಾಲೇಜಿಗೂ ಊರಿಗೂ ಕೀರ್ತಿ ತಂದಿದ್ದಾರೆ. ಇವರು ಕೊಟ್ಟಮುಡಿಯ ತಾಯತ್ ಬಾಣೆ ಮಹಮ್ಮದ್ ಹಾಗೂ ಝುಬೈದಾ ದಂಪತಿಗಳ ಪುತ್ರರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.