ಮೈಸೂರು (ವಿಶ್ವ ಕನ್ನಡಿಗ ನ್ಯೂಸ್) : ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಅಡ್ಡಗಟ್ಟಿ ಯುವಕನಿಗೆ ಚೂರಿಯುಂದ ಇರಿದು ಕೊಲೆ ಮಾಡಿರುವ ಘಟನೆ ಮೈಸೂರು ಮೆಲ್ಲಹಳ್ಳಿಯಲ್ಲಿ ನಡೆದಿದೆ. ಮನೋಜ್ ಕೊಲೆಯಾದ ಯುವಕ. ಪರಿಚಯಸ್ಥರೇ ಆದ ರಘು, ಸಚಿನ್,ಕಿರಣ್ ,ಶಂಕರ್ ಎಂಬವರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕ್ಷುಲಕ ವಿಚಾರಕ್ಕೆ ಮನೋಜ್ ಮತ್ತು ಆರೋಪಿಗಳ ನಡುವೆ ಗಲಾಟೆಯಾಗಿತ್ತು. ಈ ಕಾರಣವನ್ನಿಟ್ಟು ಮನೋಜ್ ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ವರುಣಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.