ಚಿಕ್ಕಬಳ್ಳಾಪುರ, (ವಿಶ್ವ ಕನ್ನಡಿಗ ನ್ಯೂಸ್) : ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಕೊರೊನಾ ಸೋಂಕು ನಿಯಂತ್ರಿಸಿ ದೇಶದಲ್ಲಿಯೇ ಗಮನಸೆಳೆಯುವಂತೆ ಮಾಡಿರುವ ಮತ್ತು ಆರೋಗ್ಯ ಇಲಾಖೆಯಲ್ಲಿ ಅನೇಕ ರೀತಿಯ ಸುಧಾರಣೆಯನ್ನು ತಂದಿರುವ ಆರೋಗ್ಯ ಸಚಿವ ಡಾಕ್ಟರ್ ಕೆ ಸುಧಾಕರ್ ಅವರಿಗೆ ಕರ್ನಾಟಕ ರಾಜಕೀಯದಲ್ಲಿ ಭವ್ಯ ಭವಿಷ್ಯವಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.
ನಗರದ ಸರ್ ಎಂವಿ ಕ್ರೀಡಾಂಗಣದಲ್ಲಿ ಚಿಕ್ಕಬಳ್ಳಾಪುರ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಸಚಿವರ ವಂತಹ ಪ್ರಾಮಾಣಿಕರನ್ನು ಜನರು ಬೆಂಬಲಿಸುವ ಕೆಲಸ ಮಾಡಬೇಕು ಅವರ ಕಾಲು ಗಣದಿಂದ ಇಡೀ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿ ಉತ್ತಮವಾದ ವಾತಾವರಣ ಕಂಡುಬಂದಿದೆ ಸುಧಾಕರ್ ಅವರಿಗೆ ಕರ್ನಾಟಕ ರಾಜಕೀಯ ರಂಗದಲ್ಲಿ ಭವ್ಯ ಭವಿಷ್ಯ ಅಡಗಿದೆ ಎಂದು ಘೋಷಿಸಿದರು.
ಚಿಕ್ಕಬಳ್ಳಾಪುರ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದ್ದಾರೆ ಜಿಲ್ಲೆಯು ಸಹ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದು ಪ್ರಕಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಆರೋಗ್ಯ ಸಚಿವ ಡಾಕ್ಟರ್ ಸುಧಾಕರ್ ಅವರ ಕಾರ್ಯವೈಖರಿಯನ್ನು ಹಾಡಿಹೊಗಳಿದರಲ್ಲದೆ ಮುಂದಿನ ದಿನಗಳಲ್ಲಿ ಕರ್ನಾಟಕದ ರಾಜಕೀಯದಲ್ಲಿ ಅವರಿಗೆ ಉತ್ತಮ ಭವಿಷ್ಯ ಅಡಗಿದೆ ಎನ್ನುವ ಮೂಲಕ ನೆರೆದಿದ್ದ ಜನರಲ್ಲಿ ಕುತೂಹಲ ಕೆರಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಮಳೆಯ ಅಭಾವದಿಂದ ಬರಪೀಡಿತ ಪ್ರದೇಶವಾಗಿತ್ತು ಆದರೆ ಜಿಲ್ಲೆಯಲ್ಲಿ ಸುರಿದ ಸತತ ಮಳೆಯಿಂದಾಗಿ ಮಲೆನಾಡು ಪ್ರದೇಶವಾಗಿದೆ ರೈತರು ಸಮೃದ್ಧಿಯಿಂದ ಜೀವನ ನಡೆಸುವಂತಾಗಿದೆ ಎಂದು ಬಣ್ಣಿಸಿದರು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳಿದ್ದು ಅವುಗಳನ್ನು ಅಭಿವೃದ್ಧಿಗೊಳಿಸಲು ಸಹ ಸರ್ಕಾರ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದರು.
ನಮಗೆ ದೀಪು ನಿಮಗೆ ಕಿಚ್ಚ: ಕನ್ನಡ ನಾಡಿನ ಅಭಿಮಾನಿಗಳ ಹೃದಯವನ್ನು ಗೆದ್ದ ನಟ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಹಾಡಿ ಹೊಗಳಿದ ಮುಖ್ಯಮಂತ್ರಿಗಳು ಕನ್ನಡ ನಾಡಿನ ಮತ್ತು ಅಭಿವೃದ್ಧಿ ವಿಷಯದಲ್ಲಿ ಅವರ ಕೊಡುಗೆ ಅಪಾರವಾಗಿದೆ ನಮಗೆ ದೀಪು ನಿಮಗೆ ಕಿಚ್ಚ ಎಂದ ಮುಖ್ಯಮಂತ್ರಿಗಳು ಕಿಚ್ಚ ಸುದೀಪ್ ಅವರ ತಾಯಿ ನಮ್ಮಕ್ಕ ಅನೇಕ ಬಾರಿ ನಮಗೆ ಊಟವನ್ನು ಹಾಕಿದ್ದಾರೆ ಅವರು ಮಾಮಾ ಯಾವಾಗ ಬರ್ತಾರೆ ಎಂದು ನನ್ನನ್ನು ಕೇಳಿದ್ದಾರೆ ಮುಂದಿನ ಒಂದು ವಾರದೊಳಗೆ ಬರುವುದಾಗಿ ವಾಗ್ದಾನ ಮಾಡಿದ್ದೇನೆ ಎಂದರು.
ವರದಿ ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.