(ವಿಶ್ವ ಕನ್ನಡಿಗ ನ್ಯೂಸ್) : ಚಿತ್ರನಟಿ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ರಿ ಎಂಟ್ರಿ ಕೊಡಲಿದ್ದಾರೆ. ಅವರು ಬೆಂಗಳೂರಿನ ಪದ್ಮನಾಭನಗರ ಅಥವಾ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪದ್ಮನಾಭನಗರ , ಚನ್ನಪಟ್ಟಣ ಕ್ಷೇತ್ರದ ಲೆಕ್ಕಾಚಾರ ಮಾಡಿರುವ ಕಾಂಗ್ರೆಸ್ ನಾಯಕರು, ಪ್ರಮುಖ ಒಕ್ಕಲಿಗ ಸಮೂದಾಯದ ಮತಸೆಳೆಯಲು ಪ್ಲಾನ್ ರೂಪಿಸಿದ್ದಾರೆ. ಹಾಗಾಗಿ ಎರಡು ಕ್ಷೇತ್ರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರಮ್ಯಾ ಕರೆ ತರಲು ಪ್ರಯತ್ನ ಮಾಡಲಾಗಿದೆ. ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯದಲ್ಲಿ ಪೈಪೋಟಿ ಇದೆ. ಒಕ್ಕಲಿಗ ಮತ್ತು ಅಹಿಂದ ಮತ ಲೆಕ್ಕಾಚಾರದಲ್ಲಿ ರಮ್ಯಾ ಸೂಕ್ತ ಅನ್ನೋ ಮಾತು ಕೇಳಿಬರುತ್ತಿದೆ.
ಇನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಠಕ್ಕರ್ ಕೊಡಲು ಹಾಗೂ ಒಕ್ಕಲಿಗ ಮತಗಳನ್ನು ಸೆಳೆಯಲು ರಮ್ಯಾ ಅವರನ್ನು ಸ್ಪರ್ಧೆಗಿಳಿಸಲು ಚಿಂತನೆ ಮಾಡಲಾಗಿದೆ ಎಂದೂ ಹೇಳಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.