ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಂವಿಧಾನಾತ್ಮಕವಾಗಿ ಲಭಿಸಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಮೇ 10 ರಂದು ಚಲಾಯಿಸುವ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎನ್ಎಂ ನಾಗರಾಜ್ ಅವರು ಕರೆ ನೀಡಿದರು.
ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಜಿಲ್ಲಾ ಹಾಗೂ ತಾಲೂಕ ಆಡಳಿತ ಹಾಗೂ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾನದ ಕುರಿತು ಜನಜಾಗೃತಿ ಹಾಗೂ ಪೋಸ್ಟರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮತದಾನ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ಕಲ್ಪಿಸಿದೆ ಹೀಗಾಗಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠ ಗೊಳಿಸಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಇದೆ ವೇಳೆಯಲ್ಲಿ ಮತದಾನದ ಕುರಿತು ಹಾಗೂ ಮತಗಟ್ಟೆ ಕೇಂದ್ರಗಳ ಮಾಹಿತಿಯನ್ನು ಒದಗಿಸಲು ಜನಜಾಗೃತಿ ಮೂಡಿಸಿ ಸಾರಿಗೆ ಬಸ್ಸಿಗಳು ಪೋಸ್ಟರ್ ಅಂಟಿಸುವ ಅಭಿಯಾನಕ್ಕೆ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಹಾಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ.ಟಿ ನಿಟ್ಟಾಲಿ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ಮುನಿರಾಜು, ನಗರಸಭೆಯ ಪೌರಾಯುಕ್ತ ಆರ್ ಶ್ರೀಕಾಂತ್, ಕೆ.ಎಸ್.ಆರ್.ಟಿ.ಸಿ ಡೀಸಿ ನಾಯ್ಡು, ತಾಲೂಕು ಕೃಷಿ ಇಲಾಖೆ ಅಧಿಕಾರಿ ವೀಣಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತನ್ವೀರ್ ಅಹ್ಮದ್, ಸಮಾಜ ಕಲ್ಯಾಣ ಅಧಿಕಾರಿ ಜಗದೀಶ್, ಬಿಸಿಎಂ ಅಧಿಕಾರಿ ನಾರಾಯಣಪ್ಪ, ರೇಷ್ಮೆ ಇಲಾಖೆ ಅಧಿಕಾರಿ ತಿಮ್ಮರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೌತಾಜ್, ನಗರಸಭೆಯ ಕಂದಾಯ ನಿರೀಕ್ಷಕ ಅತೀಖ್, ಆರೋಗ್ಯ ನಿರೀಕ್ಷಕ ಮುರಳಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.