ಬೆಂಗಳೂರು (www.vknews.in) : 9 ಮತ್ತು 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ಮಹಿಳೆ ಗಂಗಾದೇವಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಮಂಗಳವಾರ ರಾತ್ರಿ ಗಂಗಾದೇವಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬುಧವಾರ ಬೆಳಗ್ಗೆ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದರು.
ಕೌಟುಂಬಿಕ ಕಲಹದಿಂದ ಗಂಡನಿಂದ ದೂರವಾಗಿದ್ದ ಗಂಗಾದೇವಿ ತಾಯಿ, ಮಕ್ಕಳೊಂದಿಗೆ ವಾಸವಾಗಿದ್ದರು. ತಾಯಿ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಮಕ್ಕಳೊಂದಿಗೆ ಮನೆಯಲ್ಲಿದ್ದ ಗಂಗಾದೇವಿ ಮಕ್ಕಳು ನಿದ್ದೆ ಮಾಡುತ್ತಿದ್ದಾಗ ಮುಖಕ್ಕೆ ತಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.
ಮಕ್ಕಳು ತನ್ನಂತೆ ಜೀವನದಲ್ಲಿ ಕಷ್ಟ ಪಡಬಾರದು ಎನ್ನುವ ಕಾರಣಕ್ಕೆ ಅವರನ್ನು ಕೊಲೆ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ಹೇಳಿಕೆ ನೀಡಿದ್ದರು. ಮಕ್ಕಳಾದ 9 ವರ್ಷದ ಗೌತಮ್ ಮತ್ತು 7 ವರ್ಷದ ಲಕ್ಷ್ಮಿಯನ್ನು ಕೊಲೆ ಮಾಡಿದ್ದ ಗಂಗಾದೇವಿ ಅವರನ್ನು ಪೊಲೀಸರು ಬಂಧಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.